ಕುಡಿಯುವ ನೀರಿನ ಅರವಟ್ಟಿಗೆಗೆ ಶಾಸಕ ಚರಂತಿಮಠ ಚಾಲನೆ:

ಕುಡಿಯುವ ನೀರಿನ ಅರವಟ್ಟಿಗೆಗೆ ಶಾಸಕ ಚರಂತಿಮಠ ಚಾಲನೆ:





                ಬೇಸಿಗೆ ಕಾಲ ಆರಂಭವಾದ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ನೀರಿನ ದಾಹ ನೀಗಿಸುವ ನಿಟ್ಟಿನಲ್ಲಿ ಬಾಗಲಕೋಟೆ ನಗರದ ಪ್ರಮುಖ ವೃತ್ತಗಳಲ್ಲಿ ಕುಡಿಯುವ ನೀರಿನ ಮಣ್ಣಿನ ಅರವಟ್ಟಿಗೆಗಳನ್ನು ಸ್ಥಾಪಿಸಲಾಗುವುದು ಎಂದು ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.


ಅವರು ನಮನ ಫೌಂಡೇಶನ್ ವತಿಯಿಂದ ಪುನೀತರಾಜಕುಮಾರ ೪೮ನೇ ಜನ್ಮದಿನದ ಅಂಗವಾಗಿ ಕುಡಿಯಲು ತಂಪು ನೀರಿನ ಮಣ್ಣಿನ ಅರವಟ್ಟಿಗೆಯನ್ನು ಉದ್ಘಾಟಿಸಿ ಮಾತನಾಡಿದರು. ನಗರದಲ್ಲಿ ದಿನೇ ದಿನೇ ಬಿಸಿಲ ತಾಪ ಹೆಚ್ಚುತ್ತಿದೆ. ನಗರ ಪ್ರದೇಶದ ಜನರು ಸೇರಿದಂತೆ ಸುತ್ತಮುತ್ತಲ ಗ್ರಾಮೀಣ ಭಾಗಗಳಿಂದ ನಾನಾ ಕೆಲಸಗಳಿಗೆ ನಗರಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಲ್ಲಲ್ಲಿ ಅರವರಿಗೆ ಸ್ಥಾಪಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಸಂಘ ಸಂಸ್ಥೆಗಳ ಸೇವಾ ಕಾರ್ಯ ಪ್ರಶಂಶನೀಯವೆಂದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ ಸದಸ್ಯ ರವಿ ಧಮಜಿ, ನಬಿ ಅನಗವಾಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.













ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು