ಧ್ರುವ ನಾರಾಯಣ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ತೀವ್ರ ಸಂತಾಪ

ಧ್ರುವ ನಾರಾಯಣ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ತೀವ್ರ ಸಂತಾಪ 



ಮಾಜಿ ಸಂಸದರು, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿ.ಆರ್ ಧ್ರುವ ನಾರಾಯಣ ನಿಧಾನಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿಯು ತೀವ್ರ ಸಂತಾಪ ವ್ಯಕ್ತ ಪಡಿಸಿದೆ. ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರಾದ ಪರಶುರಾಮ ಮಹಾರಾಜರನವರ, ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ಅವರ ಶ್ರಮ, ಪ್ರಬುದ್ಧತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ್ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನದಿಗೆ ಮತ್ತು ಜನತೆಗೆ ತುಂಬಲಾರದ ನಷ್ಟವಾಗಿದೆಯೆಂದರು. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾದ ನಾಗರಾಜ ಹಾಡ್ಲಿ ಮಾತನಾಡಿ ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ್ ನೆನಪಲ್ಲಿರುತ್ತದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಹೃದಯಾಘಾತದಿಂದ ನಿಧನರಾಗಿದ್ದು ಅತೀವ ದುಃಖ ಉಂಟು ಮಾಡಿದೆ.

           ರಾಜ್ಯ ಕಾಂಗ್ರೆಸ್ ನ ಕ್ರಿಯಾಶೀಲ ನಾಯಕರಾಗಿದ್ದ ಧ್ರುವನಾರಾಯಣ್ ಪಕ್ಷದ ಆಸ್ತಿಯಾಗಿದ್ದರು. ಎರಡು ಬಾರಿ ಸಂಸದರಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಧ್ರುವನಾರಾಯಣ್ ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಅವರ ಅಕಾಲಿಕ ನಿಧನ ಕಾಂಗ್ರೆಸ್ ಕುಟುಂಬಕ್ಕೆ ಆಘಾತ ತಂದಿದೆ ಎಂದರು.



ಮಾಜಿ ಸಚಿವರಾದ ಎಚ್ ವಾಯ್ ಮೇಟಿ, ಬ್ಲಾಕ್ ಅಧ್ಯಕ್ಷರಾದ ಅಬ್ದುಲ್ ರಜಾಕ್ ಬೆಣ್ಣೂರ, ಜಿಲ್ಲಾ ಉಪಾಧ್ಯಕ್ಷ ನಿಂಗನಗೌಡ ಪಾಟೀಲ, ಎಸ್ಸಿ ಘಟಕದ ಜಿಲ್ಲಾಧ್ಯಕ್ಷರಾದ ರಾಜು ಮನ್ನಿಕೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಶಿಲ್ಪಿ, ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ನ್ಯಾಮಗೌಡ, ದ್ಯಾಮಣ್ಣ ಗಾಳಿ, ಅಶೋಕ್ ಲಾಗಲೋಟಿ, ಆನಂದ ಜಿಗಜಿನ್ನಿ, ಹಾಜಿಸಾಬ ದಂಡಿನ, ಅಮೀನಸಾಬ ರಕ್ಕಸಗಿ ಆನಂದ ರಾಥೋಡ್, ಪ್ರೇಮನಾಥ ಗರಸಂಗಿ, ಸದಾಶಿವ ಕೊಡಬಾಗಿ, ಮಲ್ಲು ಲಮಾಣಿ, ಬಿಲಾಲ ಮುಂತಾದವರು ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿದ್ದರು.






ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು