ಕೃಷ್ಣ ನದಿ ಸೇತುವೆ ಮೇಲೆ ಮೊಸಳೆ ಪ್ರತ್ಯಕ್ಷ

 ಕೃಷ್ಣ ನದಿ ಸೇತುವೆ ಮೇಲೆ ಮೊಸಳೆ ಪ್ರತ್ಯಕ್ಷ 


 ಕೋಲಾರ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 218 ರ ಕೃಷ್ಣ ನದಿ ಸೇತುವೆ ಮೇಲೆ ಶನಿವಾರ ಬೆಳಿಗ್ಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ದೊಡ್ಡ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. 

ಮೊಸಳೆ ಬಾಯಿಗೆ ಹಗ್ಗ ಕಟ್ಟಿರುವುದರಿಂದ ಆಹಾರ ಸೇವಿಸಲಾಗದೇ ನದಿಯಿಂದ ಆಚೆ ಬಂದಿರಬಹುದು. ಅಥವಾ ಜನವಸತಿ ಪ್ರದೇಶಕ್ಕೆ ನುಗ್ಗಿರುವಾಗ ಹಿಡಿದು ಹಗ್ಗ ಕಟ್ಟಿ ತಂದು ಇಲ್ಲಿ ಬಿಟ್ಟಿರಬಹುದು ಎಂದು ಶಂಕಿಸಲಾಗಿದೆ. 

ವಿಡಿಯೋ ನೋಡಿ 



ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಮೊಸಳೆ ರಕ್ಷಿಸಿ ನದಿಗೆ ಬಿಡಲಿದ್ದಾರೆ. 

ಸ್ಥಳಕ್ಕೆ ಹೆದ್ದಾರಿ ಗಸ್ತು ಪೊಲೀಸರು ಆಗಮಿಸಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಮುಂಜಾಗ್ರತೆ ಕ್ರಮವಾಗಿ ಪೊಲೀಸರು ಸ್ಥಳೀಯ ಯುವಕರ ಸಹಾಯದಿಂದ ಮೊಸಳೆಯನ್ನು ಹಗ್ಗದಿಂದ ರಸ್ತೆ ದಂಡೆಗೆ ಸರಿಸಿದ್ದಾರೆ. 

 





ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು