IAS ಅಧಿಕಾರಿ ಬಿಚ್ಚಿಟ್ಟ ಕರಾಳ ಘಟನೆ !!

ಜೀವನದಲ್ಲಿ ನಡೆದ ಕರಾಳ ಘಟನೆ ಬಿಚ್ಚಿಟ್ಟ ಜಿಲ್ಲಾಧಿಕಾರಿ:



ಜಿಲ್ಲಾ ರಕ್ಷಣಾ  ಘಟಕದ ಆಶ್ರಯದಲ್ಲಿ ದೌರ್ಜನ್ಯಕ್ಕೆ ಒಳಗಾದ ಮಕ್ಕಳ ಕುರಿತು ವರದಿ ಮಾಡುವಾಗ ಗಮನಿಸಬೇಕಾದ ಮುಖ್ಯ ಅಂಶಗಳ ಬಗ್ಗೆ ಮಾಧ್ಯಮಗಳಿಗೆ ಎಚ್ಚರಿಕೆ ನೀಡಲು ಆಯೋಜಿಸಿದ್ದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ದಿವ್ಯಾ ಎಸ್ ಅಯ್ಯರ್ ಉದ್ಘಾಟಿಸಿ ಮಾತನಾಡಿದರು.

        ಕೇರಳದ ಪಟ್ಟಣಂತಿಟ್ಟ ಜಿಲ್ಲಾಧಿಕಾರಿ ದಿವ್ಯಾ  ಎಸ್ ಅಯ್ಯರ್ ಅವರು ತಮ್ಮ ಜೀವನಲ್ಲದ ಕರಾಳ ಘಟನೆಯನ್ನು ಮಾಧ್ಯಮದ ಮುಂದೆ ಬಿಚ್ಚಿಟ್ಟಿದ್ದಾರೆ. ಅವರು ಆರನೇ ವಯಸ್ಸಿನಲ್ಲಿದ್ದಾಗ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದನ್ನು ಮತ್ತು ಆ ನೋವಿನಿಂದ ಹೊರಬಂದಿದ್ದು ಹೇಗೆ ಎಂಬುದನ್ನು ಬಹಿರಂಗಪಡಿಸಿದ್ದಾರೆ.

ನಾನು ಆರನೇ  ಅನುಭವ ಎದುರಿಸಿದೆ. ಆ ಇಬ್ಬರು ಮುಖಗಳು ನನಗೆ . ನನ್ನನ್ನು ಪ್ರೀತಿಯಿಂದ ಅವರ ಬಳಿಗೆ ಕರೆದು ನನ್ನ ದೇಹವನ್ನು ಮುಟ್ಟಿದರು. ನನ್ನ ಬಟ್ಟೆಗಳನ್ನು ಕಳಚಿ ಬೆತ್ತಲೆ ಮಾಡಲು ಯತ್ನಿಸಿದರು. ಏನೋ ಅನಿರೀಕ್ಷಿತ ಘಟನೆ ನಡೆಯಲಿದೆ ಎಂಬುದು ನನಗೆ ಅರ್ಥವಾದಾಗ ನಾನು ಅವರ ಬಿಗಿ ಹಿಡಿತದಿಂದ ಬಿಡಿಸಿಕೊಂಡು ಓದಿ ಹೋದೆ. ಆ ಸಮಯದಲ್ಲಿ ನನಗೆ ಹಾಗೆ ಮಾಡಬೇಕೆಂದು ಅನಿಸಿತು. ಆದರೆ, ಎಲ್ಲ ಮಕ್ಕಳೂ ಹಾಗೆ ಮಾಡಲು ಸಾಧ್ಯವಿಲ್ಲ ಎಂದು ದಿವ್ಯಾ ಅವರು ಹೇಳಿದರು.



ನನ್ನ ಪಾಲಕರು ಮಾನಸಿಕವಾಗಿ ನನಗೆ ಬೆಂಬಲ ನೀಡಿದ್ದರಿಂದ ನಾನು ಆ ನೋವಿನಿಂದ ಹೊರಬರಲು ಸಾಧ್ಯವಾಯಿತು. ಆ ಬಳಿಕ ನಾನು ಜನಸಂದಣಿಯನ್ನು ಎದುರಿಸಿದಾಗ, ಆ ಎರಡು ಮುಖಗಳು ಇವೆಯೇ ಎಂದು ನೋಡಲು ನಾನು ಎಲ್ಲರನ್ನು ಎಚ್ಚರಿಕೆಯಿಂದ ನೋಡುತ್ತೇನೆ. ಇಂತಹ ಕರಾಳ ಘಟನೆಗಳು ಅಮಾಯಕ ಮಕ್ಕಳ ಜೀವನದ ಉದ್ದಕ್ಕೂ ಕಾಡುತ್ತವೆ ಎಂದರು.



ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ




@@@@@@@@@@@@@@@@@@@@@@@@@







ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು