ಎಲ್ಲ ನಿರುದ್ಯೋಗಿಗಳಿಗೂ ಭತ್ಯೆ ಇಲ್ಲ ಈ ವರ್ಷ ಡಿಗ್ರಿ ಪಾಸಾದವರಿಗೆ ಮಾತ್ರ ಯುವನಿಧಿ' । ನೌಕರಿ ಸಿಗುತ್ತಿದ್ದಂತೆ ಭತ್ಯೆ ವಿತರಣೆ ಸ್ಥಗಿತ : ಸಿಎಂ

ಎಲ್ಲ ನಿರುದ್ಯೋಗಿಗಳಿಗೂ ಭತ್ಯೆ ಇಲ್ಲ 

ಈ ವರ್ಷ ಡಿಗ್ರಿ ಪಾಸಾದವರಿಗೆ ಮಾತ್ರ ಯುವನಿಧಿ' । ನೌಕರಿ ಸಿಗುತ್ತಿದ್ದಂತೆ ಭತ್ಯೆ ವಿತರಣೆ ಸ್ಥಗಿತ : ಸಿಎಂ 




ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಿಗೆ ಕೆಲ ಷರತ್ತುಗಳನ್ನು ವಿಧಿಸಿದ್ದು, 'ಯುವನಿಧಿ' ಯೋಜನೆಯಡಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಉತ್ತೀರ್ಣರಾದ ಪದವೀಧರ ನಿರುದ್ಯೋಗಿಗಳಿಗೆ ಮಾತ್ರ ಎರಡು ವರ್ಷಗಳಿಗೆ ಸೀಮಿತವಾಗಿ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಹೀಗಾಗಿ ಈಗಾಗಲೇ ನಿರುದ್ಯೋಗ ಸಮಸ್ಯೆ ಎದುರಿಸುತ್ತಿರುವ ಹಾಲಿ ನಿರುದ್ಯೋಗಿಗಳಿಗೆ ಯೋಜನೆ ಅನ್ವಯವಾಗುವುದಿಲ್ಲ. 

       ಪದವಿ ಮುಗಿಸಿ 180 ದಿನಗಳಾದರೂ ಉದ್ಯೋಗ ಲಭಿಸದ 18 ರಿಂದ 25 ವರ್ಷ ವರ್ಷದೊಳಗಿನ ಯುವಕರು ಮಾಹಿತಿ ಸಂಗ್ರಹಿಸುತ್ತೇವೆ. ಇವರಲ್ಲಿ ಪದವೀಧರರಿಗೆ ಮಾಸಿಕ ೩ ಸಾವಿರ ರೂ ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ಮಾಸಿಕ 1500 ರೂ ನಿರುದ್ಯೋಗ ಭತ್ಯೆ ಪಾವತಿ ಮಾಡುತ್ತೇವೆ ಎಂದು ಕಾಂಗ್ರೆಸ್ ಪಕ್ಷ ಚುನಾವಣಾ ಘೋಷಣೆ ವೇಳೆ ಹೇಳಿತ್ತು. 

ಆಶಾ ಕಾರ್ಯಕರ್ತರಿಗೆ ಹಾಗೂ ಬಿಸಿ ಊಟ ಕಾರ್ಯಕರ್ತರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಮತ್ತು ಅಂಗನವಾಡಿ ಸಹಾಯಕರಿಗೆ ಕರ್ನಾಟಕ ಸರ್ಕಾರದಿಂದ ದಿಂದ ವೇತನ ಜಾಸ್ತಿ ಮಾಡುವ ಮತ್ತೊಂದು ಗ್ಯಾರಂಟಿ ಘೋಷಣೆ !



ಆದರೆ, ಶನಿವಾರದ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಮುಖ್ಯ ಮಂತ್ರಿ ಸಿದ್ಧರಾಮಯ್ಯ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪದವಿ ಹಾಗೂ ಡಿಪ್ಲೋಮಾ ಮುಗಿಸಿರುವವರಿಗೆ ಮಾತ್ರ ಮುಂದಿನ 2 ವರ್ಷದವರೆಗೆ ನಿರುದ್ಯೋಗ ಭತ್ಯೆ ನೀಡುತ್ತೇವೆ. ಇದರ ನಡುವೆ ಸರ್ಕಾರಿ ಅಥವಾ ಖಾಸಗಿ ಯಾವುದೇ ಉದ್ಯೋಗ ದೊರೆತರೆ ನಿರುದ್ಯೋಗ ಭತ್ಯೆ ನಿಲ್ಲಿಸುತ್ತೇವೆ ಎಂದು ಹೇಳಿದ್ದಾರೆ. ಪದವಿ ಮುಗಿಸಿ ಕಳೆದ 2-3 ವರ್ಷಗಳಿಂದ ಉದ್ಯೋಗಕ್ಕಾಗಿ ಅಲೆಯುತ್ತಿರುವ ನಿರುದ್ಯೋಗಿಗಳಿಗೆ ಯೋಜನೆಯಿಂದ ಪ್ರಯೋಜನವಾಗುವುದಿಲ್ಲ ಎಂಬಂತಾಗಿದೆ. 


ಗೃಹ ಲಕ್ಷ್ಮಿ, ಗೃಹ ಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆಗಳಿಗೂ ರೂಪುರೇಷೆ ಸಿದ್ಧಪಡಿಸಿ ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ. ತನ್ಮೂಲಕ ಈ ಗ್ಯಾರಂಟಿ ಯೋಜನೆಗಳಿಗೂ ಷರತ್ತು ಅನ್ವಯಿಸುವ ಮುನ್ಸೂಚನೆ ನೀಡಲಾಗಿದೆ.


ಚಲಾವಣೆಯಿಂದ 2,000 ರೂಪಾಯಿ ನೋಟುಗಳನ್ನು ಹಿಂತೆಗೆದುಕೊಳ್ಳಲಾಗಿದೆ, ಆರ್‌ಬಿಐ ಕಾನೂನುಬದ್ಧವಾಗಿ ಉಳಿಯುತ್ತದೆ ಎಂದು ಹೇಳಿದೆ



ದಾರಿಹೋಕರಿಗೆಲ್ಲಾ ನೀಡಲಾಗದು : ಡಿಕೆಶಿ 

ಮೊದಲ ಸಚಿವ ಸಂಪುಟ ಸಭೆಯಲ್ಲೇ ಗ್ಯಾರಂಟಿ ಯೋಜನೆ ಜಾರಿ ಮಾಡುವುದಾಗಿ ಹೇಳಿದ್ದಿರಿ ಎಂಬ ಪ್ರಶ್ನೆಗೆ, ದಾರಿಯಲ್ಲಿ ಹೋಗುವವರಿಗೆಲ್ಲ ನೀಡಲಾಗುವುದಿಲ್ಲ. ಅರ್ಹರನ್ನು ಗುರುತಿಸಬೇಕು. ಇದಕ್ಕಾಗಿ ನಿಯಮಾವಳಿ ರೂಪಿಸಬೇಕು. ಬಳಿಕ ಅನುಷ್ಟಾನ ಮಾಡಬೇಕಾಗುತ್ತದೆ ಎಂದು ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಸಮರ್ಥನೆ ನೀಡಿದರು.

ಸಾಮಾನ್ಯ ಬಸ್ಸಲ್ಲಿ ಉಚಿತ 

ಇನ್ನು ಶಕ್ತಿ' ಯೋಜನೆ ಅಡಿ ಸರ್ಕಾರಿ ಸಾರಿಗೆ ನಿಗಮಗಳ ಸಾಮಾನ್ಯ ಬಸ್ಸುಗಳಲ್ಲಿ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ. ಐಷಾರಾಮಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. ಹೊರ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಇರುವುದಿಲ್ಲ. ರಾಜ್ಯದ ಮಹಿಲ್ಯರಿಗೆ ಬಸ್ ಪ್ರಯಾಣಕ್ಕಾಗಿಯೇ ಪ್ರತ್ಯೇಕ ಪಾಸು ನೀಡಲಾಗುತ್ತದೆ.




ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ



@@@@@@@@@@@@@@@@@@@@@@@@@






ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು