ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆಗೆ ಪ್ರಧಾನಿ ನರೇಂದ್ರ ಮೋದಿಗೆ ಅಹ್ವಾನ :

ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆಗೆ ಪ್ರಧಾನಿ ನರೇಂದ್ರ ಮೋದಿಗೆ ಅಹ್ವಾನ :





          ರಾಮಮಂದಿರದಲ್ಲಿ ಶ್ರೀರಾಮನ ನೂತನ ವಿಗ್ರಹ ಪ್ರತಿಷ್ಠಾಪನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು ಎಂದು ದೇವಾಲಯದ ಟ್ರಸ್ಟ್ ಅಧಿಕಾರಿಯೊಬ್ಬರು ತಿಳಿಸಿದರು.

ಟ್ರಸ್ಟ್ ಸದಸ್ಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಂದಿರದ ಗರ್ಭಗುಡಿಯಲ್ಲಿ ವಿಗ್ರಹದ ಪ್ರತಿಷ್ಠಾಪನೆಗೆ ಇನ್ನು ಯಾವುದೇ ದಿನಾಂಕ ನಿಗದಿಯಾಗಿಲ್ಲ ಎಂದೂ ರಾಮಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದರು.






ತಾವು ಆಗಮಿಸಲು ಅನುಕೂಲವಾಗುವಂತಹ ಸಮಯ ತಿಳಿಸುವಂತೆ ಪ್ರಧಾನಿಯವರಿಗೆ ಪತ್ರ ಕಳುಹಿಸಲಾಗುತ್ತಿದೆ. 2024 ರ ಡಿಸೆಂಬರ್ 26ರ ನಡುವೆ ಯಾವುದಾದರೊಂದು ಅನುಕೂಲಕರ ದಿನಾಂಕಕ್ಕೆ ತಮ್ಮ ಅನುಮತಿ ನೀಡುವಂತೆ ಪತ್ರದಲ್ಲಿ  ಅವರನ್ನು ಕೋರಲಾಗುತ್ತಿದೆ. ಈ ಪತ್ರಕ್ಕೆ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಕೂಡ ಸಹಿ ಹಾಕಿದ್ದಾರೆ ಎಂದು ಅವರು ಹೇಳಿದರು.

ದೇವಾಲಯದ ನೆಲ ,ಮಹಡಿಯನ್ನು ಅಕ್ಟೊಬರ್ ವೇಳೆಗೆ ಕಾರ್ಯಾಚರಣೆಗೆ ಸಿದ್ಧಗೊಳಿಸಲಾಗುವುದು. ಎರಡು ತಿಂಗಳು ಪ್ರಾಯೋಗಿಕ ಕಾರ್ಯನಿರ್ವಹಣೆ ನಡೆಯಲಿದೆ. ನಂತರ ಡಿಸೆಂಬರ್ ವೇಳೆಗೆ ನೆಲ ಮಹಡಿಯ ಪ್ರವೇಶವನ್ನು ಭಕ್ತರಿಗೆ ತೆರೆಯಲಾಗುವುದು ಎಂದು ಹೇಳಿದರು.






ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ



@@@@@@@@@@@@@@@@@@@@@@@@@










ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು