ಅಕ್ಕಿ ಜೊತೆ ಹಣದ ಭಾಗ್ಯ 10 ರಿಂದ ಶುರು :

 ಅಕ್ಕಿ ಜೊತೆ ಹಣದ ಭಾಗ್ಯ 10 ರಿಂದ ಶುರು :



ರಾಜ್ಯದ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ೫ ಕೆಜಿ. ಹೆಚ್ಚುವರಿ ಅಕ್ಕಿ ಬದಲು ಹಣ ನೀಡುವ ಪ್ರಕ್ರಿಯೆ ಜು.1 ರಿಂದಲೇ ಜಾರಿಯಾಗಲಿದೆ ಎಂದು ನಾವು ಹೇಳಿಲ್ಲ. ಜು.10 ರಿಂದ ಅಕ್ಕಿ ಬದಲು ನೇರ ನಗದು ವರ್ಗಾವಣೆ ಮೂಲಕ ಹಣ ಹಾಕಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. 



ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯದ ಅಡಿ ಹಾಲು ನೀಡುತ್ತಿರುವ ೫ ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿಯಾಗಿ ೫ ಕೆಜಿ ಅಕ್ಕಿಯನ್ನು ನೀಡುವುದಾಗಿ ಹೇಳಿದ್ದರು. ಆದರೆ ಕೇಂದ್ರ ಸರ್ಕಾರ ಅಕ್ಕಿ ನೀಡದೆ ರಾಜಕೀಯ ಮಾಡಿದ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೂ 170 ರೂ. ಗಳಂತೆ ಹಣ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ. ಆದರೆ, ಈ ಹಣ ಜು.1 ರಿಂದಲೇ ಖಾತೆಗೆ ವರ್ಗಾವಣೆ ಮಾಡುವುದಾಗಿ ಹೇಳಿಲ್ಲ ಎಂದರು. 



ಜುಲೈ ತಿಂಗಳಲ್ಲೇ ಅಕ್ಕಿ ಬದಲು ಹಣ ನೀಡುವ ಕೆಲಸ ಮಾಡುತ್ತೇವೆ. ಜು.10 ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಶುರುವಾಗಲಿದೆ. ಜುಲೈ ತಿಂಗಳಲ್ಲಿ ಎಲ್ಲಾ ಅರ್ಹ ಪಡಿತರ ಚೀಟಿದಾರರಿಗೂ ಹಣ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.   



ಇದೆ ವಿಚಾರವಾಗಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, 'ಅಕ್ಕಿ ನೀಡುವುದಾಗಿ ಮಾತು ಮೊಟ್ಟಿದ್ದೆವು. ಮುಖ್ಯಮಂತ್ರಿಗಳು ಹಾಗೂ ಆಹಾರ ಸಚಿವರು ಎಲ್ಲಾ ರೀತಿಯ ಪ್ರಯತ್ನ ಮಾಡಿದರೂ ಅಕ್ಕಿ ಹೊಂದಿಸಲು ಸಾಧ್ಯವಾಗಿಲ್ಲ. ಹೀಗಾಗಿ ಅಕ್ಕಿ ಬದಲಿಗೆ ಅವರ ಖಾತೆಗಳಿಗೆ ಹಣ ಹಾಕುತ್ತಿದ್ದೇವೆ. ಶೇ. ೮೫ ರಷ್ಟು ಖಾತೆಗಳ ಮಾಹಿತಿ ಈಗಾಗಲೇ ಸಂಗ್ರಹವಾಗಿದೆ. ಉಳಿದ ಮಾಹಿತಿ ಸಂಗ್ರಹಿಸಿ ಹಣ ಹಾಕುತ್ತೇವೆ.' ಎಂದು ಮಾಹಿತಿ ನೀಡಿದರು.






ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು