ಗೃಹಜ್ಯೋತಿ ನೋಂದಣಿ ಮಾಡದಿದ್ದರೆ ಇಲ್ಲಿದೆ ಹೊಸ ನಿಯಮ !! ಹಾಗೂ ಜುಲೈ 26-27 ರವರೆಗೆ ಗೃಹಜ್ಯೋತಿಗೆ ಅರ್ಜಿ ಸಲ್ಲಿಸಲು ಅವಕಾಶ :

ಗೃಹಜ್ಯೋತಿ ನೋಂದಣಿ ಮಾಡದಿದ್ದರೆ ಇಲ್ಲಿದೆ ಹೊಸ ನಿಯಮ !! ಹಾಗೂ ಜುಲೈ 26-27 ರವರೆಗೆ ಗೃಹಜ್ಯೋತಿಗೆ ಅರ್ಜಿ ಸಲ್ಲಿಸಲು ಅವಕಾಶ :





           ಗೃಹಜ್ಯೋತಿಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡು 24 ದಿನ ಕಳೆದಿದೆ. ಆರಂಭದಲ್ಲಿ ನಿತ್ಯ 6 ರಿಂದ 8 ಲಕ್ಷ ಜನ ಅರ್ಜಿ ಸಲ್ಲಿಸುತ್ತಿದ್ದರು. ಆದರೆ ಕಳೆದೊಂದು ವಾರದಿಂದ ಈ ಸಂಖ್ಯೆ 1.5 ರಿಂದ 2 ಲಕ್ಷಕ್ಕೆ ಇಳಿಕೆಯಾಗಿದೆ. ಅಲ್ಲದೆ ಗ್ರಾಮೀಣ ಭಾಗದಲ್ಲಿ ಈ ಸಂಖ್ಯೆ ಕುಸಿತ ಕಂಡಿದ್ದು, ಗ್ರಾಹಕರ ಬಳಿಯೇ ತೆರಳಿ ನೋಂದಣಿ ಮಾಡುವ ಚಿಂತನೆ ನಡೆದಿದೆ, ಗ್ರಾಮೀಣ ಭಾಗಗಲ್ಲಿ ಇದರ ಬಗ್ಗೆ ಅರಿವಿಲ್ಲದ, ಗೊತ್ತಿದ್ದರೂ ನೋಂದಣಿ ಮಾಡಿಕೊಳ್ಳಲಾಗದ ಅಥವಾ ಸಾಧ್ಯವಾಗದ ವರ್ಗಗಳನ್ನು ತಲುಪುವ ಅವಶ್ಯಕತೆ ಇದೆ. ಅಗತ್ಯ ಬಿದ್ದರೆ ಗ್ರಾಹಕರಿದ್ದಲ್ಲಿಯೇ ನಮ್ಮ ಮೀಟರ್ ರೀಡರ್ ಗಳು ಅಥವಾ ಗ್ರಾಮ ವಿದ್ಯುತ್ ಪ್ರತಿನಿಧಿಗಳು ತೆರಳಿ, ನೋಂದಣಿ ಮಾಡಿಸಿ ಕೊಳ್ಳಲಿದ್ದಾರೆ ಎಂದು ಬೆಸ್ಕಾಂ ನಿರ್ದೇಶಕರು ತಿಳಿಸಿದ್ದಾರೆ.


        ಜುಲೈಗೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಅವರು, ಜುಲೈ ತಿಂಗಳ ವಿದ್ಯುತ್ ಬಿಲ್ ಆಗಸ್ಟ್ ಮೊದಲ ವಾರದಲ್ಲೀ ಬರಲಿದೆ. ಇನ್ನೆರಡು ತಿಂಗಳಲ್ಲಿ ಕೆಇಬಿ ಕಚೇರಿಗಳಲ್ಲಿ ಅದಾಲತ್ ನಡೆಸುತ್ತೇವೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಹಾಕದವರಿಗೂ ಅದಾಲತ್ ಮಾಡುತ್ತೇವೆ. ಅರ್ಹರಿಗೆ ಗೃಹಜ್ಯೋತಿ ಯೋಜನೆಯ ಲಾಭ ದೊರೆಯುವಂತೆ ಮಾಡುತ್ತೇವೆ ಎಂದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು