ಗೃಹಲಕ್ಷ್ಮೀ ಯೋಜನೆಯಡಿ ಸಾಮಾನ್ಯವಾಗಿ ಕೇಳುವ ಪ್ರಶ್ನೆಗಳು :

ಗೃಹಲಕ್ಷ್ಮೀ ಯೋಜನೆಯಡಿ ಸಾಮಾನ್ಯವಾಗಿ ಕೇಳುವ ಪ್ರಶ್ನೆಗಳು :




1) ಗೃಹಲಕ್ಷ್ಮಿ ಯೋಜನೆ ಎಂದರೇನು?
    "ಗೃಹಲಕ್ಷ್ಮಿ ಯೋಜನೆ" ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ ಮಾಸಿಕ ರೂ 2000/- ಹಣ ವಿತರಣೆ ಮಾಡಲಾಗುತ್ತಿದೆ. 

2) ನಾನು ಈ ಯೋಜನೆಗೆ ಅರ್ಹಳೇ?
     ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿದ ಮಹಿಳೆ ಅರ್ಹಳು.

3) ಮನೆಯ ಯಜಮಾನಿ ಯಾರು?
     ರೇಷನ್ ಕಾರ್ಡ್ ನಲ್ಲಿ ನಮೂದಿಸಿರುವ ಮನೆಯ ಯಜಮಾನಿಯನ್ನೇ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಎಂದು ಪರಿಗಣಿಸಲಾಗುತ್ತದೆ.

4) ಪಡಿತರ ಚೀಟಿಯಲ್ಲಿ ಅತ್ತೆ ಯಜಮಾನಿಯಾಗಿದ್ದು, ಸದಸ್ಯರ ಪಟ್ಟಿಯಲ್ಲಿ ಸೊಸೆಯ ಹೆಸರಿದ್ದು, ಸೊಸೆಯನ್ನೇ ಫಲಾನುಭವಿಯನ್ನಾಗಿಸುವ ಸೌಲಭ್ಯವಿದೆಯೇ?
      ಇಲ್ಲ. ಪಡಿತರ ಚೀಟಿಯಲ್ಲಿಯ ಯಜಮಾನಿಯೇ ಈ ಯೋಜನೆಯ ಫಲಾನುಭವಿಯಾಗಿರುತ್ತಾರೆ.


5) ಕುಟುಂಬದ ಯಜಮಾನಿಯು ಇತ್ತೀಚಿಗೆ ನಿಧನರಾದರೆ, ಈ ಸನ್ನಿವೇಶದಲ್ಲಿ ಏನು ಮಾಡಬಹುದು?
     ಪಡಿತರ ಚೀಟಿಯಲ್ಲಿ ಅಗತ್ಯ ತಿದ್ದುಪಡಿಯಾದ ನಂತರ ನೋಂದಣಿಸಬಹುದು.

6) ಕುಟುಂಬದ ಯಜಮಾನಿಯು ಮರಣ ಹೊಂದಿದ್ದಲ್ಲಿ ಮುಂದಿನ ಕ್ರಮವೇನು?
      ಕುಟುಂಬದ ಯಜಮಾನಿಯು ಮರಣ ಹೊಂದಿದ್ದಲ್ಲಿ ಯೋಜನೆಯ ಸೌಲಭ್ಯ ಸ್ಥಗಿತಗೊಳಿಸಲಾಗುವುದು.

7) ಕುಟುಂಬದ ಮುಖ್ಯಸ್ಥರು ಮೃತಪಟ್ಟರು ಸಹ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆಯದಿರುವ ಪಡಿತರ ಚೀಟಿಗಳನ್ನು ಪಡಿಗಣಿಸಲಾಗುತ್ತದೆಯೇ?
      ನಿಮ್ಮ ಸಮೀಪದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಕಚೇರಿಯನ್ನು ಸಂಪರ್ಕಿಸುವುದು.

8) ಈ ಯೋಜನೆಗೆ ನೋಂದಾಯಿಸುವುದು ಹೇಗೆ?
      ಈ ಯೋಜನೆಯನ್ನು ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಿಬಿಎಂಪಿ ವಾರ್ಡ್ ಕಚೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳ ಮೂಲಕ ಉಚಿತವಾಗಿ ನೋಂದಾಯಿಸಬಹುದು.
      
     ಸ್ಥಳೀಯ ಮಟ್ಟದಲ್ಲಿ ಸರ್ಕಾರದಿಂದ ನೇಮಕವಾದ ಪ್ರಜಾ ಪ್ರತಿನಿಧಿಗಳು ಮನೆಮನೆಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಕೊಳ್ಳುತ್ತಾರೆ.


9) ಈ ಯೋಜನೆಯ ಪ್ರಯೋಜನವನ್ನು ಸೇವಾ ಕೇಂದ್ರಗಳಿಗೆ ಹೋಗದೆ ಪಡೆಯಬಹುದೇ?
     ಹೌದು. ಪ್ರಜಾಪ್ರತಿನಿಧಿ ಮೂಲಕ ಇದು ಸಧ್ಯ.

10) ಈ ಯೋಜನೆಯ ಪಡೆಯಲು ಯಾವ ದಾಖಲೆಗಳು ಸಲ್ಲಿಸಬೇಕು?
ರೇಷನ್ ಕಾರ್ಡ್ ಪ್ರತಿ, ಯಜಮಾನಿ ಮತ್ತು ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಮತ್ತು ಯೋಜನೆಯ ನಗದು ಸೌಲಭ್ಯ ಪಡೆಯಲು ಇಚ್ಛಿಸುವ ಬ್ಯಾಂಕ್ ಖಾತೆಯ ಪಾಸ್ ಬುಕ್ ಪ್ರತಿ ಅಗತ್ಯವಿದೆ.

11) ಈ ಯೋಜಾಗೆ ನೋಂದಾಯಿಸುವಾಗ ಶುಲ್ಕ ಪಾವತಿಸಬೇಕೇ?
      ನೋಂದಣಿ ಸಂಪೂರ್ಣ ಉಚಿತ.

12) ಈ ಯೋಜನೆಗೆ ನೋಂದಾಯಿಸಲು ಕೊನೆಯ ದಿನಾಂಕ ಯಾವಾಗ?
     ಯಾವುದೇ ಕೊನೆಯ ದಿನಾಂಕದ ಮಿತಿಯಿಲ್ಲ.

13) ಈ ಯೋಜನೆಯನ್ನು ಯಾವಾಗಿನಿಂದ ಜಾರಿಗೆ ತರಲಾಗುತ್ತದೆ?
     ಜುಲೈ 19  ರಂದು ಚಾಲನೆ ಮತ್ತು ಆಗಸ್ಟ್ 15ರ ನಂತರ ಫಲಾನುಭವಿಗಳು ಮೊದಲ ಹಣಕಾಸು ನೆರವು ಪಡೆಯುತ್ತಾರೆ/

14) ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಕಾಯುತ್ತಿರುವವರು ಅರ್ಹರೇ?
   ಇಲ್ಲ. ಸದ್ಯದ ಮಾರ್ಗಸೂಚಿ ಪ್ರಕಾರ ಅರ್ಜಿ ಸಲ್ಲಿಸಿ ಕಾಯುತ್ತಿರುವವರು ಅರ್ಹರಲ್ಲ.

15) ಕುಟುಂಬದ ಮುಖ್ಯಸ್ಥರಿಗಾಗಿ ನಾವು ಈಗ ರೇಷನ್ ಕಾರ್ಡ್ ನಲ್ಲಿ ಬದಲಾವಣೆಗಳನ್ನು ಮಾಡಬಹುದೇ?
     ನಿಮ್ಮ ಸಮೀಪದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಚೇರಿಯನ್ನು ಸಂಪರ್ಕಿಸಿ.

16) ನೋಂದಣಿ ನಂತರ ನಾನು ಯಾವುದೇ ಸ್ವೀಕೃತಿಯನ್ನು ಪಡೆಯಬಹುದೇ?
     ಹೌದು, ನೋಂದಣಿ ಸಮಯದಲ್ಲಿ ಮೆಸೇಜ್ ಅಥವಾ SMS ಅನ್ನು ಫಲಾನುಭವಿಗಳಿಗೆ ನೀಡಲಾಗುತ್ತದೆ.

17) ಫಲಾನುಭವಿಗಳಿಗೆ ಹಣ ಹೇಗೆ ತಲುಪುತ್ತದೆ?
     ಅರ್ಹ ಕುಟುಂಬದ ಯಜಮಾನಿಯ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಅಥವಾ ಆಧಾರ್ ಲಿಂಕ್ ಆಗದಿರುವ ಬ್ಯಾಂಕ್ ಖಾತೆಗೆ RTGS ಮೂಲಕ ಮಾಸಿಕ ಹಣ ವಿತರಣೆ ಮಾಡಲಾಗುತ್ತದೆ.

18) ಕುಟುಂಬದ ಯಜಮಾನಿ ಬೇರೆ ಸದಸ್ಯರ ಬ್ಯಾಂಕ್ ಖಾತೆ ನೀಡಬಹುದಾ?
   ಇಲ್ಲ. ಕುಟುಂಬದ ಯಜಮಾನಿ ತಮ್ಮದೇ ಬ್ಯಾಂಕ್ ಖಾತೆಯನ್ನು ನೀಡಬೇಕು.

19) ಗಂಡ ಮತ್ತು ಹೆಂಡತಿ ಜಂಟಿ ಖಾತೆಯನ್ನು ಹೊಂದಿದ್ದಾರೆ, ಜಂಟಿ ಖಾತೆ ವಿವರಗಳನ್ನು ನೋಂದಾಯಿಸಲು ಒದಗಿಸಬಹುದೇ?
    ಇಲ್ಲ. ಯೋಜನೆಯಡಿ ನೋಂದಾಯಿಸಿಕೊಳ್ಳುವವರ ಹೊಸ ಬ್ಯಾಂಕ್ ಖಾತೆಯನ್ನು ತೆರೆದು ಪಾಸ್ ಪುಸ್ತಕದ ಪ್ರತಿಯನ್ನು ಒದಗಿಸಬೇಕು.

20) ನಾನು ರಾಷ್ಟ್ರೀಕೃತ / ಷೆಡ್ಯೂಲ್ಡ್ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿದ್ದೇನೆ, ನಾನು ಗೃಹಲಕ್ಷ್ಮಿ ಯೋಜನೆಗೆ ಖಾತೆಯನ್ನು ಬಳಸಬಹುದೇ?
     ಹೌದು, ಬಳಸಬಹುದು.

21)  ಮಗ/ಮಗಳು ತೆರಿಗೆ ಪಾವತಿದಾರನಾಗಿದ್ದರೆ ಅಥವಾ ಐಟಿ ರಿಟರ್ನ್ಸ್ ಸಲ್ಲಿಸಿದ್ದರೆ, ತಾಯಿ ಗೃಹಲಕ್ಷ್ಮಿ ಯೋಜನೆಗೆ ಅರ್ಹರಾಗುತ್ತಾರೆಯೇ?
    ಹೌದು. ಅರ್ಹರಾಗುತ್ತಾರೆ.

22) ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ ಏನು ಮಾಡಲಾಗುವುದು?
      ಈಗಾಗಲೇ ಪಾವತಿಸಲಾಗಿರುವ ಹಣವನ್ನು ಫಲಾನುಭವಿಗಳಿಂದ ವಸೂಲು ಮಾಡಲಾಗುವುದು ಮತ್ತು ಅಂತಹವರ ವಿರುದ್ಧ ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

23) ಆಧಾರ್ ಮತ್ತು ಪಡಿತರ ಚೀಟಿಯಲ್ಲಿ ಹೆಸರು/ವಿಳಾಸ ಹೊಂದಿಕೆಯಾಗದಿದ್ದರೆ ಅಂತಹವರನ್ನು ನೋಂದಣಿ ಮಾಡಿಕೊಳ್ಳಲಾಗುತ್ತದೆಯೇ?
       ಈಗಾಗಲೇ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಜೋಡಣೆಯಾಗಿರುವುದರಿಂದ ಈ ಪ್ರಶ್ನೆ ಉದ್ಭವಿಸುವುದಿಲ್ಲ.

24) ನನ್ನ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿತ್ತು, ಆದರೆ ಪ್ರಸ್ತುತ ಸದರಿ ಮೊಬೈಲ್ ಸಂಖ್ಯೆ ನಿಷ್ಕ್ರಿಯಗೊಂಡಿದೆ. ನಾನು ಹೇಗೆ ನೋಂದಾಯಿಸಬೇಕು?
      ಆಧಾರ್ ಸಂಖ್ಯೆಗೆ ಜೋಡಣೆಯಾಗಿದ್ದ ಮೊಬೈಲ್ ಸಂಖ್ಯೆಯು ಪ್ರಸ್ತುತ ನಿಷ್ಕ್ರಿಯಗೊಂಡಿದ್ದಲ್ಲಿ ನೀವು ನೋಂದಣಿ ಕೇಂದ್ರಗಳಲ್ಲಿರುವ ಬೈಯೋಮ್ಯಾಟ್ರಿಕ್ ಉಪಕರಣಕ್ಕೆ ನಿಮ್ಮ ಬೆರಳಚ್ಚು ನೀಡಿ, ಆಧಾರ್ ಧೃಢೀಕರಣ ಮಾಡಬಹುದು.

25) ಯೋಜನೆಯಡಿ ನೋಂದಾಯಿಸಿಕೊಳ್ಳಲು ಗಂಡನ ವಿವರಗಳು ಕಡ್ಡಾಯವಾಗಿದೆ. ವಿಚ್ಚೇದನ ಪ್ರಕರಣವು ಬಾಕಿ ಉಳಿದಿದ್ದರೆ ಅಥವಾ ನ್ಯಾಯಾಲಯದಲ್ಲಿ ಪ್ರಕ್ರಿಯೆಯಲ್ಲಿದ್ದರೆ ಏನು ಮಾಡಬೇಕು?
     ಕಾನೂನು ರೀತಿ ವಿಚ್ಚೇದನ ಆಗಿದ್ದಲ್ಲಿ ಗಂಡನ ವಿವರಗಳು ಸಲ್ಲಿಸುವ ಅಗತ್ಯವಿಲ್ಲ.

26) ನಾಗರಿಕರು ಅಸ್ತಿ ತೆರಿಗೆಯನ್ನು ಪಾವತಿಸುತ್ತಿದ್ದರೆ ಅವರು ನೋಂದಾಯಿಸಿಕೊಳ್ಳಲು ಅರ್ಹರಾಗುತ್ತಾರೆಯೇ?
      ಹೌದು, ಅರ್ಹರಿರುತ್ತಾರೆ.

27) ನಾಗರಿಕರು ಸರ್ಕಾರಿ ಮತ್ತು ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡಿದ್ದರೆ, ಈಗ ಅವರು ನಿವೃತ್ತರಾಗಿದ್ದಾರೆ ಮತ್ತು ಪಿಂಚಣಿ ಪಡೆಯುತ್ತಿರುವವರು ಯೋಜನೆಗೆ ನೋಂದಾಯಿಸಿಕೊಳ್ಳಲು ಅರ್ಹರಾಗುತ್ತಾರೆಯೇ?
  ಅವರು ಯಾವುದೇ ಆದಾಯ ತೆರಿಗೆಯನ್ನು ಪಾವತಿಸದಿದ್ದರೆ ಅರ್ಹರಾಗುತ್ತಾರೆ.

28) ಒಂದಕ್ಕಿಂತ ಹೆಚ್ಚು ಕುಟುಂಬದ ಮುಖ್ಯಸ್ಥರಿರುವ ಪಡಿತರ ಚೀಟಿಗಳು ಯೋಜನೆಗೆ ಪರಿಗಣಿಸಲಾಗುತ್ತದೆಯೇ?
       ನಿಮ್ಮ ಸಮೀಪದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಚೇರಿಯನ್ನು ಸಂಪರ್ಕಿಸುವುದು.

29) ಕುಟುಂಬದ ಮುಖ್ಯಸ್ಥರ ಆಧಾರ್ ಅನ್ನು ನವೀಕರಿಸದ ಮತ್ತು ಆಧಾರ್ ನೋಂದಾಯಿಗೆ ಜೋಡಣೆ ಮಾಡಿರದ ಪಡಿತರ ಚೀಟಿಗಳನ್ನು ಯೋಜನೆಗೆ ಪರಿಗಣಿಸಲಾಗುತ್ತದೆ?
      ನಿಮ್ಮ ಸಮೀಪದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಚೇರಿಯನ್ನು ಸಂಪರ್ಕಿಸುವುದು.

30) ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರು ಮಹಿಳೆಯಾಗಿದ್ದು ಅದಾಹ್ರ್ ಕಾರ್ಡ್ ನಲ್ಲಿ ಪುರುಷ/ತೃತೀಯ ಲಿಂಗಿಯಾಗಿರುವ ಪ್ರಕರಣಗಳನ್ನು ಯೋಜನೆಗೆ ಪರಿಗಣಿಸಲಾಗುತ್ತದೆಯೇ?
       ನಿಮ್ಮ ಸಮೀಪದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಚೇರಿಯನ್ನು ಸಂಪರ್ಕಿಸುವುದು.

31) ತಡೆಹಿಡಿಯಲಾದ/ರದ್ದುಗೊಳಿಸಿದ ಪಡಿತರ ಚೀಟಿಗಳನ್ನು ಯೋಜನೆಗೆ ಪರಿಗಣಿಸಲಾಗುತ್ತದೆಯೇ?
     ಈ ಯೋಜನೆಗೆ ಅರ್ಹರಿರುವುದಿಲ್ಲ.

32) ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆಯಾಗಿದ್ದು, ಪಡಿತರ ಚೀಟಿಯಲ್ಲಿ ಲಿಂಗ ಪುರುಷ ಎಂದು ನಮೂದಾಗಿದ್ದರೆ ಯೋಜನೆಗೆ ಪರಿಗಣಿಸಲಾಗುತ್ತದೆಯೇ?
       ನಿಮ್ಮ ಸಮೀಪದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಚೇರಿಯನ್ನು ಸಂಪರ್ಕಿಸುವುದು.

33) ನನ್ನ ನೋಂದಣಿಗಾಗಿ ನಿಗದಿಪಡಿಸಿದ ದಿನಾಂಕ ಮತ್ತು ಸಮಯವನ್ನು ನಾನು ಎಲ್ಲಿ ತಿಳಿದುಕೊಳ್ಳಬಹುದು?
        ನಿಮ್ಮ ಪಡಿತರ ಚೀಟಿಯೊಂದಿಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಗೆ ನೋಂದಣಿ ವೇಲಾ ಪಟ್ಟಿಯ ಸಂದೇಶಕ್ಕೆ ಕಳುಹಿಸಲಾಗಿದೆ. ಅಲ್ಲದೆ, ನಿಮ್ಮ ನೋಂದಣಿ ವೇಲಾ ಪಟ್ಟಿಯನ್ನು ನೀವು ಈ ಕೆಳಗಿನ ವಿಧಾನಗಳಲ್ಲಿ ಪರಿಶೀಲಿಸಬಹುದು.
ನಿಮ್ಮ ವೇಳಾಪಟ್ಟಿಯನ್ನು ತಿಳಿಯಲು 1902 ಗೆ ಕರೆ ಮಾಡಿ ಹಾಗೂ ನೀಡಲಾಗುವ ಸೂಚನೆಗಳನ್ನು ಅನುಸರಿಸಿ.
ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು 8147-500-500 SMS ಮಾಡಿ ಮತ್ತು ನಿಗದಿಪಡಿಸಲಾದ ದಿನಾಂಕ ಮತ್ತು ಸಮಯದ ಮಾಹಿತಿ ಪಡೆಯಿರಿ.
ಪಡಿತರ ಚೀಟಿ ಸಂಖ್ಯೆಯನ್ನು ಬಳಸಿ ಸೇವಸಿಂಧು ಪೋರ್ಟಲ್ ನಲ್ಲಿ ಹುಡುಕಿ.


34) ನನಗೆ ನಿಗದಿಪಡಿಸಲಾದ ದಿನಾಂಕ ಮತ್ತು ಸಮಯದಲ್ಲಿ ನೋಂದಾಯಿಸುವುದು ಅಗತ್ಯವೇ?
    ಹೌದು, ಸುಗಮ ನೋಂದಣಿಯನ್ನು ಖಚಿತಪಡಿಸಿಕೊಳ್ಳಲು ವೇಳಾಪಟ್ಟಿಯನ್ನು ಮಾಡಲಾಗಿದೆ. ದಯವಿಟ್ಟು ನಿಗದಿಪಡಿಸಿದ ವೇಳಾಪಟ್ಟಿಯನ್ನು ಅನುಸರಿಸಿ.

35) ಸೂಚಿಸಿದ ದಿನಾಂಕ ಮತ್ತು ಸಮಯದಂದು ನಿಗದಿಪಡಿಸಿದ ಕೇಂದ್ರಕ್ಕೆ ಭೇಟಿ ನೀಡಲು ನನಗೆ ಸಾಧ್ಯವಾಗಲಿಲ್ಲ. ನಾನು ಹೇಗೆ ನೋಂದಾಯಿಸಿಕೊಳ್ಳಬಹುದು. ?
     ನಿಮಗೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಲ್ಲಿ ನೋಂದಾಯಿಸಲು ಸಾಧ್ಯವಾಗದಿದ್ದಲ್ಲಿ ನೀವು ಯಾವುದೇ ಕೆಲಸದ ದಿನಾಂಕದಂದು ಸಂಜೆ 5 ಗಂಟೆಯ ನಂತರ ನಿಮಗೆ ನಿಗದಿಪಡಿಸಿದ ಕೇಂದ್ರಕ್ಕೆ ಭೇಟಿ ನೀಡಬೇಕು. ಮತ್ತು ನೋಂದಾಯಿಸಿಕೊಳ್ಳಬೇಕು.

ನಾನು ಬೇರೆ ಗ್ರಾಮ/ಪಟ್ಟಣ/ ತಾಲುಕು ಅಥವಾ ಜಿಲ್ಲೆಗೆ ಸ್ಥಳಾಂತರಗೊಂಡಿದ್ದೇನೆ ಆದರೆ ನಾನು ಪಡಿತರ ಚೀಟಿಯಲ್ಲಿ ವಿಳಾಸವನ್ನು ನವೀಕರಿಸಿಲ್ಲ.

1) ನನ್ನ ನೋಂದಣಿಯನ್ನು ಎಲ್ಲಿ ನಿಗದಿಪಡಿಸಲಾಗುವುದು?
ನಿಮ್ಮ ನೋಂದಣಿ ವೇಳಾಪಟ್ಟಿಯು ನಿಮ್ಮ ಪಡಿತರ ಚೀಟಿಯ ವಿಳಾಸಕ್ಕೆ ಸಮೀಪವಿರುವ ಕೇಂದ್ರದಲ್ಲಿರುತ್ತದೆ. 

2) ನನ್ನ ಪ್ರಸ್ತುತ ವಸತಿ ಸ್ಥಳದಲ್ಲಿ ನೋಂದಾಯಿಸಲು ಸಾಧ್ಯವೇ?
ಹೌದು, ವೇಳಾಪಟ್ಟಿಯ ಮೂಲಕ ದಾಖಲಾತಿಗಳು ಪೂರ್ಣಗೊಂಡ ನಂತರವೇ ಈ ಅವಕಾಶವನ್ನು ನೀಡಲಾಗುತ್ತದೆ. 

3) ಪಡಿತರ ಚೀಟಿಯಲ್ಲಿ ನನ್ನ ಪ್ರಸ್ತುತ ವಿಳಾಸವನ್ನು ನವೀಕರಿಸಲು ನನಗೆ ಅವಕಾಶವಿದೆಯೇ? 
ನಿಮ್ಮ ಸಮೀಪದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಚೇರಿಯನ್ನು ಸಂಪರ್ಕಿಸುವುದು.

36) ನನ್ನ ಪಡಿತರ ಚೀಟಿಗಾಗಿ ನಾನು ವೇಳಾಪಟ್ಟಿಯನ್ನು ಹುಡುಕಿದಾಗ ನನ್ನ ಪಡಿತರ ಚೀಟಿಯನ್ನು ತಡೆಹಿಡಿಯಲಾಗಿದೆ/ರದ್ದುಗೊಂಡಿದೆ ಎಂದು ತೋರಿಸುತ್ತದೆ. ಗೃಹಲಕ್ಷ್ಮಿ ಯೋಜನೆಗೆ ದಾಖಲಾಗಲು ನಾನು ಅರ್ಹಳೆ?
     ಇಲ್ಲ, ಸಕ್ರಿಯ ಪಡಿತರ ಚೀಟಿಗಳ Random ಆಗಿ ಅವರಿಗೆ ಹತ್ತಿರವಿರುವ ಕೇಂದ್ರಕ್ಕೆ ನಿಗದಿಪಡಿಸಲಾಗಿದೆ. ಇದನ್ನು ವಿವಿಧ ಹಂತಗಳಲ್ಲಿ ಮಾಡಲಾಗುತ್ತಿದೆ. ಆದ್ದರಿಂದ ಮುಂದಿನ ಸುತ್ತಿನ ಹಂಚಿಕೆಯಲ್ಲಿ ನಿಯೋಜಿಸಬೇಕಾದ ಪಡಿತರ ಚೀಟಿಗಳನ್ನು 1 ಆಗಸ್ಟ್ 2023 ರಿಂದ ನಂತರ ಪರಿಶೀಲಿಸಲು ತಿಳಿಸಲಾಗಿದೆ. 

37) ನಾನು ಸಕ್ರಿಯ ಪಡಿತರ ಚೀಟಿಯನ್ನು ಹೊಂದಿದ್ದೇನೆ ಆದರೆ ಪುರುಷ ಸದಸ್ಯರು ಕುಟುಂಬದ ಮುಖ್ಯಸ್ಥರಾಗಿದ್ದಾರೆ. ನಾನು ಗೃಹಲಕ್ಷ್ಮಿ ಯೋಜನೆಗೆ ಅರ್ಹಳೆ?
     ಇಲ್ಲ,

38) ನಾನು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದೇನೆ ಆದರೆ ಇನ್ನು ನೀಡಿಲ್ಲ ನಾನು ಯೋಜನೆಗೆ ನೋಂದಾಯಿಸಬಹುದೇ?
         ನಿಮಗೆ ಪಡಿತರ ಚೀಟಿ ನೀಡಿದ ನಂತರ ನೀವು ನೋಂದಾಯಿಸಬಹುದು.

39) ನನ್ನ ಬಿಪಿಎಲ್/ಎಪಿಎಲ್ ಪಡಿತರ ಚೀಟಿ ರದ್ದುಗೊಂಡಿದೆ, ಆದರೆ ನನ್ನ ಕುಟುಂಬ ಕರ್ನಾಟಕದಲ್ಲಿ ವಸಿಡುತ್ತಿದೆ. ನಾನು ಯೋಜನೆಗೆ ನೋಂದಾಯಿಸಬಹುದೇ? 
       ಇಲ್ಲ, ಸಕ್ರಿಯ ಪಡಿತರ ಚೀಟಿಯಲ್ಲಿರುವ ಕುತುಮ್ಬದ ಮಹಿಳಾ ಯಜಮಾನಿ ಮಾತ್ರ ನೋಂದಾಯಿಸಬಹುದು.

40) ನಾನು ಮಹಿಳೆ ಕುಟುಂಬದ ಯಜಮಾನಿ, ಆದರೆ ಆದಾಯ ತೆರಿಗೆ ಪಾವತಿಸುತ್ತಿದ್ದೇನೆ  ನಾನು ಯೋಜನೆಗೆ ಅರ್ಹಳೆ?
    ಇಲ್ಲ, ಕುಟುಂಬದ ಯಜಮಾನಿ ಆದಾಯ ತೆರಿಗೆ ಪಾವತಿಸುದ್ದಲ್ಲಿ ಯೋಜನೆಗೆ ಅರ್ಹರಲ್ಲ.

41) ನನಗೆ ನೋಂದಣಿಗಾಗಿ ನಿಗದಿಪಡಿಸಿದ ಕೇಂದ್ರವು ನನ್ನ ಗ್ರಾಮ/ಗ್ರಾಮ ಪಂಚಾಯತ್ ನ ಹೊರಗಿದೆ ಏಕೆ?
      ಸಾಧ್ಯವಾದಷ್ಟು ನಿಮ್ಮ ಪಡಿತರ ಚೀಟಿಯ ವಿಲಾಸದನ್ವಯ ನೋಂದಣಿ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಅದು ಸಾಧ್ಯವಿಲ್ಲದ ಕಡೆ ನೀವು ಪಡಿತರ ಪಡೆಯುವ ನ್ಯಾಯಬೆಲೆ ಅಂಗಡಿ ವ್ಯಾಪ್ತಿಗೆ ಬರುವ ಇತರೆ ಗ್ರಾಮ ಪಂಚಾಯತಿಯ ನೋಂದಣಿ ಕೇಂದ್ರವನ್ನು ನಿಗದಿಪಡಿಸಲಾಗಿದೆ.


42) ನನಗೆ ನಿಯೋಜಿಸಲಾದ ಕೇಂದ್ರಕ್ಕೆ ಭೇಟಿ ನೀಡಲು ಅನಾರೋಗ್ಯದ ಕಾರಣದಿಂದ ಅಥವಾ ದೂರ ಇರುವುದರಿಂದ ನೋಂದಾಯಿಸಲು ಸಾಧ್ಯವಾಗುವುದಿಲ್ಲ. ನಾನು ಹೇಗೆ ನೋಂದಾಯಿಸಬಹುದು?
        ಗೃಹಲಕ್ಷ್ಮಿ ಯೋಜನೆಯ ಸಂಪೂರ್ಣ ಯಶಸ್ವಿಯಾಗಿ ಸರ್ಕಾರವು ಅದೇ ಗ್ರಾಮದ ಪ್ರಜಾಪ್ರತಿನಿಧಿಗಳನ್ನು ನೇಮಿಸುತ್ತಿದೆ, ಅವರು ನೋಂದಣಿಗಾಗಿ ಮನೆಗಳಿಗೆ ಭೇಟಿ ನೀಡುತ್ತಾರೆ. ನೀವು ಅವರ ಸಹಾಯ್ದಿಂದ ನೋಂದಾಯಿಸಿಕೊಳ್ಳಬಹುದು. 




ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು