ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ, ದಿನಾಂಕಗಳ ವಿವರ ತಿಳಿಯಿರಿ.

ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ, ದಿನಾಂಕಗಳ ವಿವರ ತಿಳಿಯಿರಿ.


   
ಈ ಹಿಂದೆ ಆಹಾರ ಇಲಾಖೆಯ ವೆಬ್ ಸೈಟ್ ಮೇಲೆ ಲೋಡ್ ಹೆಚ್ಚಾದ ಹಿನ್ನಲೆ ವೆಬ್ ಸೈಟ್ ಅನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಇದೀಗ ಆಯಾ ಜಿಲ್ಲೆಗಳಿಗೆ ನಿಗದಿತ ದಿನಾಂಕಗಳನ್ನು ನೀಡಲಾಗಿದ್ದು, ಈ ಮೂಲಕ ನೀಡಿರುವ ದಿನಾಂಕದಂದು ಮಾತ್ರ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

             ಮೂರೂ ಹಂತಗಳಲ್ಲಿ ಜಿಲ್ಲಾವಾರು ಪಡಿತರ ಚೀಟಿಯಲ್ಲಿ ಹೆಸರು ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಹಾಗಾದರೆ ಪಡಿತರ ಚೀಟಿಯಲ್ಲಿ ಹೆಸರು ತಿದ್ದುಪಡಿ ಕಾರ್ಯ ಯಾವ್ಯಾವ ಜಿಲ್ಲೆಗಳಲ್ಲಿ ಯಾವ ದಿನಾಂಕದವರೆಗೂ ನದಿಯಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.

whatss


ಪಡಿತರ ಚೀಟಿ ತಿದ್ದುಪಡಿಗೆ ಜಿಲ್ಲಾವಾರು ದಿನಾಂಕಗಳ ವಿವರ...

            ಬೆಳಗಾವಿ, ಹಾವೇರಿ, ಬಾಗಲಕೋಟೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಗದಗ, ಮಂಡ್ಯ, ಉತ್ತರ ಕನ್ನಡ, ವಿಜಯಪುರ, ಮೇಸುರ್, ಕೊಡಗು, ಹಾವೇರಿ ಹಾಗೂ ಹಾಸನ ಜಿಲ್ಲೆಗಳಲ್ಲಿ ಜನರು ಸೆಪ್ಟೆಂಬರ್ 12 ರಿಂದ 14 ರವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಅವಕಾಶವನ್ನು ನೀಡಲಾಗಿದೆ. ಇನ್ನು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಫಲಾನುಭವಿಗಳಿಗೆ ಸೆಪ್ಟೆಂಬರ್ 9 ರಿಂದ ಸೆಪ್ಟೆಂಬರ್ 11ರವರೆಗೆ  ಕಲ್ಪಿಸಲಾಗಿದೆ.

ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ,ಆ ತುಮಕೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6 ಅಂದರೆ ಇಂದಿನಿಂದ ಸೆಪ್ಟೆಂಬರ್ 8ರವರೆಗೆ ಅವಕಾಶ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಪಡಿತರ ಚೀಟಿ ಹೆಸರು ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಇದರ ಉಪಯೋಗವನ್ನು ಪಡಿತರ ಚೀಟಿದಾರರು ಪಡೆದುಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.


   

2 ಕಾಮೆಂಟ್‌ಗಳು

ನವೀನ ಹಳೆಯದು