ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ.



 

ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ :

ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಟ ರೂ 2 ಲಕ್ಷಗಳವರೆಗೆ ಆರ್ಥಿಕ ನೆರವು, ಕನಿಷ್ಠ ರೂ 1 ಲಕ್ಷಗಳವರೆಗಿನ ಸಾಲದಲ್ಲಿ ಶೇ 20 ರಷ್ಟು ಗರಿಷ್ಟ ರೂ 20,000/-ಗಳ ಸಹಾಯಧನ ಹಾಗೂ ಗರಿಷ್ಟ 1 ಲಕ್ಷದಿಂದ ರೂ 2 ಲಕ್ಷದವರೆಗೆ ಶೇ 15 ರಷ್ಟು ಗರಿಷ್ಟ ರೂ 30,000/- ಸಹಾಯಧನ ಉಳಿಕೆ ಮೊತ್ತ ಶೇ 4 ರ ಬಡ್ಡಿದರದಲ್ಲಿ ನಿಗಮದಿಂದ ನೇರ ಸಾಲ

ಅರ್ಹತೆಗಳು:

ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3 ಬಿಗೆ ಸೇರಿದವರಾಗಿರಬೇಕು. 
ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ 98,000/- ಗಳು ಪಟ್ಟಣ ಪ್ರದೇಶದವರಿಗೆ ರೂ 1,20,000/- ಗಳ ಒಳಗಿರಬೇಕು, 
ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.
ಪ್ರವರ್ಗ-1ರಡಿಯಲ್ಲಿನ ಜಾತಿಗಳಲ್ಲಿ ಬರುವ ಅರ್ಜಿದಾರರು ಕನಿಷ್ಠ 7ನೇ ತರಗತಿ ಹಾಗೂ ಉಳಿದ ಇತರ ಪ್ರವರ್ಗಗಳಲ್ಲಿನ ಅರ್ಜಿದಾರರು 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.

ಗಂಗಾ ಕಲ್ಯಾಣ ನೀರಾವರಿ ಯೋಜನೆ :

ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ರೂ 4.75 ಲಕ್ಷ ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ ರೂ 75,000/- ಗಳನ್ನೂ ಎಸ್ಕಾಂ ಗಳಿಗೆ ಪಾವತಿಸಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ 50,000/- ಗಳ ಸಾಲವನ್ನು ಶೇ 4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಾಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ 2 ಎಕರೆ ಜಾಮೀನು ಇರಬೇಕು. 

ಅರಿವು - ಶೈಕ್ಷಣಿಕ ಸಾಲ ಯೋಜನೆ:

ಈ ಯೋಜನೆಯಡಿ CET ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ ಗಳ ವ್ಯಾಸಂಗಕ್ಕೆ ವಾರ್ಷಿಕ 1 ಲಕ್ಷ ರೂ ಗಳಂತೆ ಕೊರ್ಸ್ ನ 
ಅವಧಿಗೆ ಗರಿಷ್ಟ 4 ಲಕ್ಷ ರೂಗಳಿಂದ 5 ಲಕ್ಷ ರುಗಳಿಗೆ ವಾರ್ಷಿಕ ಶೇ 2ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ಅಭ್ಯರ್ಥಿ ಮತ್ತು ಅವರ ಕುಟುಂಬದವರ ವಾರ್ಷಿಕ ವರಮಾನವು ರೂ 3.50 ಲಕ್ಷಗಳ ಮಿತಿಯಲ್ಲಿರಬೇಕು.


whatss

ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ:

ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವವಿದ್ಯಾಲಯಗಲ್ಲಿ ಪಿ ಹೆಚ್ ಡಿ ಪೋಸ್ಟ್ ಡಾಕ್ಟರ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿಂಗ್ & ಟೆಕ್ನಲಾಜಿ , ಮ್ಯಾನೇಜ್ ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಲಾಜಿ, ಅಗ್ರಿಕಲ್ಚರ್ & ಅಲೈಡ್ ಸೈನ್ಸಸ್ / ಟೆಕ್ನಲಾಜಿ, ಮೆಡಿಸಿನ್, ಹ್ಯುಮಾನಿಟಿಸ್ & ಸೋಶಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. 
ಕುಟುಂಬದ ವಾರ್ಷಿಕ ಆದಾಯ ಗರಿಷ್ಟ 8 ಲಕ್ಷ ರೂ ಗಳ ಮಿತಿಯಲ್ಲಿಬೇಕು. 
ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ 60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು. QS World Ranking  500ರೊಳಗೆ  ಬರುವ ವಿಶ್ವ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರಬೇಕು. 
ವಾರ್ಷಿಕ ಗರಿಷ್ಟ 10 ಲಕ್ಷ ಹಾಗೂ ಪೂರ್ಣ ಕೋರ್ಸ್ ನ ಅವಧಿಗೆ ರೂ 20 ಲಕ್ಷಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು. 
ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ/ಜಾಮೀನುದಾರ/ಪೋಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ನೀಡಬೇಕು. 
ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ ವಿದ್ಯಾರ್ಥಿಯ ವಿಸಾ ಪಾಸ್ ಪೋರ್ಟ್ ಮತ್ತು ಏರ್ ಟಿಕೆಟ್ ಪ್ರತಿ ಒದಗಿಸಬೇಕು. 
ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸ್ವಾವಲಂಬಿ ಸಾರಥಿ ಯೋಜನೆ:

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕ್ ಗಳಿಂದ ಪಡೆಯುವ ಸಾಲಕ್ಕೆ ಶೇ 50ರಷ್ಟು, ಗರಿಷ್ಟ ರೂ 3 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.

ಅರ್ಹತೆಗಳು: 

ಸೌಲಭ್ಯ ಪಡೆಯಲು ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1,  2ಎ,  3ಎ  ಮತ್ತು  3 ಬಿ ಗೆ ಸೇರಿರದವರಾಗಿರಬೇಕು. 
ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂಪಾಯಿ 98,000/- ಗಳು 
ಪಟ್ಟಣ ಪ್ರದೇಶದವರಿಗೆ ರೂಪಾಯಿ 1,20,000/- ಗಳ ಒಳಗಿರಬೇಕು. 
ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. 
ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಛಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಿಗಿಯನ್ನು ಹೊಂದಿರಬೇಕು.

 

ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)

ಡಿ ದೇವರಾಜ ಅರಸು ಹಿಂದುಳಿದ ವರ್ಗಗಳಿಗೆ ಸೇರದವರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು/ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳಿಂದ ಸಾಲ ಪಡೆದಲ್ಲಿ ನಿಗಮದಿಂದ ಶೇ 20 ರಷ್ಟು ಗರಿಷ್ಟ 1 ಲಕ್ಷ ಸಹಾಯಧನ ಮಂಜೂರು ಮಾಡಲಾಗುತ್ತದೆ. ಉಳಿಕೆ ಮೊತ್ತವನ್ನು ಬ್ಯಾಂಕ್ ನಿಂದ ಸಾಲ ಪಡೆಯಬೇಕು.

ಅರ್ಹತೆಗಳು:

ಹಿಂದುಳಿದ ವರ್ಗಗಳ ಪ್ರವರ್ಗ 1,  2ಎ,  3ಎ,  ಮತ್ತು 3ಬಿ ಗೆ ಸೇರಿರಬೇಕು. 
ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ 98,000/-ಗಳು ಪಟ್ಟಣ ಪ್ರದೇಶದವರಿಗೆ ರೂ 1,20,000/- ಗಳ ಒಳಗಿರಬೇಕು. 
ಅರ್ಜಿದಾರರ ವಯಸ್ಸು 18ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ:

ಹಿಂದುಳಿದ ವರ್ಗಗಳ ವಿದ್ಯಾವಂತ ಯುವಜನರನ್ನು ಗುರುತಿಸಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿಯನ್ನು ಸರ್ಕಾರೀ ಸ್ವಾಮ್ಯದ ಸಂಸ್ಥೆಗಳಾದ ITIs, GTTC,  KGTTI,  ATDC ಗಳ ಮೂಲಕ ವಿವಿಧ ಅಲ್ಪಾವಧಿ ಮತ್ತು ಉತ್ಕೃಷ್ಟ ಕೌಶಲ್ಯ ತರಬೇತಿಯನ್ನು ನೀಡಿ ಅವರ ಉದ್ಯೋಗ ಸಾಮರ್ಥ್ಯವನ್ನು ಹಾಗೂ ಸಾಮಾಜಿಕ/ ಆರ್ಥಿಕ ಸ್ಥಿತಿಗತಿಗಳನ್ನು ಉನ್ನತೀಕರಿಸುವ ನಿಟ್ಟಿನಲ್ಲಿ ಉದ್ಯೋಗಿಮುಖಿಗಳನ್ನಾಗಿಸುವುದು.

ಅರ್ಹತೆಗಳು:
10ನೇ ತರಗತಿ/ದ್ವಿತೀಯ ಪಿಯುಸಿ/ಡಿಪ್ಲೊಮಾ/ಪದವಿ/ಇಂಜಿನಿಯರಿಂಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ನಿಗಮದ ವ್ಯಾಪ್ತಿಗೆ  ಒಳಪಡುವ ಜಾತಿಗಳಿಗೆ ಸೇರಿದವರಾಗಿರಬೇಕು. 

ಕರ್ನಾಟಕ ರಾಜ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ನಿಗಮದ ವ್ಯಾಪ್ತಿಗೆ ಒಳಪಡುವ ಜಾತಿಗಳಿಗೆ ಸೇರಿದವರಾಗಿರಬೇಕು.

ಅರ್ಜಿದಾರರ ವಯಸ್ಸು 18 ರಿಂದ 25 ವರ್ಷಗಳ ಒಳಗಿರಬೇಕು.

ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕುಟುಂಬದ ವಾರ್ಷಿಕ ವರಮಾನ ಮಿತಿ ಇರುವುದಿಲ್ಲ. ಪ್ರವರ್ಗ 2ಎ,  3ಎ ಮತ್ತು  3 ಬಿ ಗೆ ಸೇರಿದ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ 8 ಲಕ್ಷಕ್ಕಿಂತ ಕಡಿಮೆ ಇರಬೇಕು.

whatss

ಅರ್ಜಿದಾರರು https://www.kaushalkar.com/  ಜಾಲತಾಣದೊಂದಿಗೆ ಅರ್ಜಿ ಸಲ್ಲಿಸಬಹುದು.


           ಈ ಮೇಲ್ಕಂಡ ಸೌಲಭ್ಯಗಳನ್ನು  ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಸಿಂಧು ಪೋರ್ಟಲ್ ಮೂಲಕ ಹಾಗೂ ಗ್ರಾಮ ಒನ್,  ಬೆಂಗಳೂರು ಒನ್,  ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 31.10.2023 ಆಗಿದ್ದು, ನಿಗದಿತ ಅವಧಿಯ ಒಳಗಾಗಿ ಅರ್ಜಿಯನ್ನು ಸಲ್ಲಿಸಿ.








ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು