ಜವಾಹರ್ ನವೋದಯ ವಿದ್ಯಾಲಯದ 9 ಮತ್ತು 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ..... ಕೂಡಲೇ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ ಹಾಗು ದಾಖಲೆ ಮತ್ತು ವಿಧಾನವನ್ನು ತಿಳಿಯಿರಿ...

ಜವಾಹರ್ ನವೋದಯ ವಿದ್ಯಾಲಯದ 9 ಮತ್ತು 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ..... ಕೂಡಲೇ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ ಹಾಗು ದಾಖಲೆ ಮತ್ತು ವಿಧಾನವನ್ನು ತಿಳಿಯಿರಿ...



 

ಜವಾಹರ್ ನವೋದಯ ವಿದ್ಯಾಲಯದ 9 ಮತ್ತು 11ನೇ ತರಗತಿ ಪ್ರವೇಶದ ಅರ್ಜಿ ಮಾಹಿತಿ :

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ ಮತ್ತು 11ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.

https://cbseitms.nic.in/2023/nvsxi_11/PrincipalLogin/getafflictionno ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಗಳು:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು. 

ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿರುವ ಸರ್ಕಾರಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 2023-24ರ ಶೈಕ್ಷಣಿಕ ಅವಧಿಯಲ್ಲಿ ಮತ್ತು 10 ನೇ ತರಗತಿಯಲ್ಲಿ ಓದುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

whatss

9ನೇ ತರಗತಿಗೆ ಅರ್ಜಿ ಸಲ್ಲಿಸಲು 2009 ಮೇ ರಿಂದ 2011ರ ಜುಲೈ 31 ರ ನಡುವೆ ಜನಿಸಿರಬೇಕು. 

11ನೇ ತರಗತಿಗೆ ಅರ್ಜಿ ಸಲ್ಲಿಸಲು 2007ರ ಜೂನ್ ರಿಂದ 2009ರ ಜುಲೈ 31 ರ ನಡುವೆ ಜನಿಸಿರಬೇಕು.

ಆಯ್ಕೆ ಪ್ರಕ್ರಿಯೆ ಹೀಗಿದೆ;
👇👇👇👇
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಆಯ್ಕೆ ಪರೀಕ್ಷೆಯು 2024ರ ಫೆಬ್ರವರಿ 10 ರಂದು ನಡೆಯಲಿದೆ.

8 ನೇ ತರಗತಿ ವಿದ್ಯಾರ್ಥಿಗಳಿಗೆ ಆಯ್ಕೆ ಪರೀಕ್ಷೆ: ಹಿಂದಿಇಂಗ್ಲಿಷ್ಗಣಿತ ಮತ್ತು ವಿಜ್ಞಾನ ಓಎಂಆರ್ ಆಧಾರಿತ ವಸ್ತುನಿಷ್ಠ ಪ್ರಕಾರ ದ್ವಿಭಾಷಾ ಪತ್ರಿಕೆ (ಹಿಂದಿ ಮತ್ತು ಇಂಗ್ಲಿಷ್) ಪಠ್ಯಕ್ರಮ ಮತ್ತು ಆಯ್ಕೆಯ ಮಾನದಂಡಗಳಿಗಾಗಿ ಎನ್‍ವಿಎಸ್ ಅಧಿಸೂಚನೆಯನ್ನು ನೋಡಬಹುದು.

10ನೇ ತರಗತಿ ವಿದ್ಯಾರ್ಥಿಗಳಿಗೆ ಆಯ್ಕೆ ಪರೀಕ್ಷೆ: ಮಾನಸಿಕ ಸಾಮಥ್ರ್ಯಇಂಗ್ಲಿಷ್ಗಣಿತವಿಜ್ಞಾನ ಮತ್ತು ಸಮಾಜ ವಿಜ್ಞಾನ ಒಎಂಆರ್ ಆಧಾರಿತ ವಸ್ತುನಿಷ್ಠ ಪ್ರಕಾರ ದ್ವಿಭಾಷಾ ಪತ್ರಿಕೆ (ಹಿಂದಿ ಮತ್ತು ಇಂಗ್ಲಿಷ್) ಪಠ್ಯಕ್ರಮ ಮತ್ತು ಆಯ್ಕೆಯ ಮಾನದಂಡಗಳಿಗಾಗಿ ಎನ್‍ವಿಎಸ್ ಅಧಿಸೂಚನೆಯನ್ನು ನೋಡಬಹುದು.

10ನೇ ತರಗತಿ ಅಧ್ಯಯನದ ಜಿಲ್ಲೆ ಮತ್ತು ನಿವಾಸ ಒಂದೇ ಆಗಿದ್ದರೆನಂತರ ಮಾತ್ರ ಅಭ್ಯರ್ಥಿಯನ್ನು ಜಿಲ್ಲಾ ಮಟ್ಟದ ಮೆರಿಟ್‍ಗೆ ಪರಿಗಣಿಸಲಾಗುತ್ತದೆ ಎಂದು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು