1000 ಗ್ರಾಮ ಆಡಳಿತಾಧಿಕಾರಿ ಅರ್ಜಿ ಆಹ್ವಾನ:ಕರ್ನಾಟಕ ಪರೀಕ್ಷಾ ಪ್ರಾಧಿಕಾರ ||

1000 ಗ್ರಾಮ ಆಡಳಿತಾಧಿಕಾರಿ ಅರ್ಜಿ ಆಹ್ವಾನ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ||


   

 

ನೇಮಕಾತಿ ಅಧಿಸೂಚನೆ 

         ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.


1. ಶೈಕ್ಷಣಿಕ ವಿದ್ಯಾರ್ಹತೆ :

ಗ್ರಾಮ ಆಡಳಿತ ಅಧಿಕಾರಿ : ದ್ವಿತೀಯ ಪಿಯುಸಿ ಅಥವಾ ತತ್ಸಮಾನ ( ಸರ್ಕಾರದ ಸುತ್ತೋಲೆ ಸಂಖ್ಯೆ : ಸಿಆಸುಇ 81 ಸೇವನೆ 2017, ದಿ: 27/02/2018 ರನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿಸಿದೆ.) 

👉 ಸಿಬಿಎಸ್ಸಿ ಮತ್ತು ಐಸಿಎಸ್ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ .

👉ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.

👉ನ್ಯಾಷನಲ್ ಇನ್ಸ್ಟಿಟ್ಯೂಟ್ ಆಪ್ ಓಪನ್ ಸ್ಕೂಲಿಂಗ್ ( ಎನ್ ಐ ಓ ಎಸ್ ) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್ / ಎಚ್ .ಎಸ್.ಸಿ .

👉ಮೂರು ವರ್ಷಗಳ ಡಿಪ್ಲೊಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೊಮಾ ( ಜೆ.ಓ.ಸಿ/ಜೆ.ಓ.ಡಿ.ಸಿ/ ಜೆ.ಎಲ್.ಡಿ.ಸಿ )

( ಅಭ್ಯರ್ಥಿಗಳು ಎನ್ ಐ ಓ ಎಸ್ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿ ಗೆ ತತ್ಸಮಾನವೆಂದು ಪರಿಗಣಿಸಬಹುದು).

2. ಪಿಂಚಣಿ ಸೌಲಭ್ಯ: ಪಿಂಚಣಿ ರಹಿತ (NPS)

3. ವಯೋಮಿತಿ : ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ ೧೮ ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.


ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಕರ್ನಾಟಕ ನಾಗರೀಕ ಸೇವಾ ( ಸಾಮಾನ್ಯ ನೇಮಕಾತಿ) ನಿಯಮಗಳು, 1997 ರ ನಿಯಮ 3(6) ರಲ್ಲಿ ನಿಗದಿಪಡಿಸಿರುವಂತೆ ನಿಗದಿತ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

4. ಹುದ್ದೆಗಳ ವರ್ಗಿಕರಣ : ಈ ಅಧಿಸೂಚನೆಯ ಕೊನೆಯಲ್ಲಿ ಪ್ರಕಟಿಸಲಾಗಿದೆ.

5. ಅರ್ಜಿ ಸಲ್ಲಿಸುವ ವಿಧಾನ : ಪ್ರಾಧಿಕಾರ ವೆಬ್ ಸೈಟ್ http;//kea.kar.nic.in ನಲ್ಲಿ ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು. ಅಭ್ಯರ್ಥಿಯು ಯಾವುದಾದರು ಒಂದು ಜಿಲ್ಲೆಗೆ ಮಾತ್ರ ಹುದ್ದೆ ಬಯಸಿ ಅರ್ಜಿಯನ್ನು ಸಲ್ಲಿಸತಕ್ಕದ್ದು. ಒಮ್ಮೆ ಸಲ್ಲಿಸಿದ ಅರ್ಜಿಯಲ್ಲಿನ ಯಾವುದೇ ಮಾಹಿತಿಯನ್ನು ಯಾವುದೇ ಹಂತದಲ್ಲಿ ಬದಲಾವಣೆ/ ತಿದ್ದುಪಡಿಮಾಡಲು ಅವಕಾಶವಿರುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಎಚ್ಚರಿಕೆಯಿಂದ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

whatss


6. ಅಭ್ಯರ್ಥಿಗಳು ಕೇವಲ ಒಂದು ಜಿಲ್ಲೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿದ್ದಲ್ಲಿ, ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಬಳಸಲಾದ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು ಹಾಗೂ ಸದರಿ ಅರ್ಜಿಯಲ್ಲಿ ಕೋರಲಾದ ಒಂದು ಜಿಲ್ಲೆಗೆ ಮಾತ್ರ ಪರಿಗಣಿಸಲಾಗುವುದು. ಅರ್ಜಿಯಲ್ಲಿನ ಯಾವುದೇ ಮಾಹಿತಿಯನ್ನು ಯಾವುದೇ ಹಂತದಲ್ಲಿ ಬದಲಾವಣೆ/ ತಿದ್ದುಪಡಿಮಾಡಲು ಅವಕಾಶವಿರುವುದಿಲ್ಲ.


ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಭರ್ತಿ ಮಾಡುವ ಮೊದಲು ಅರ್ಹತೆಗೆ ಸಂಬಂಧಿಸಿದ ಎಲ್ಲಾ ಸೂಚನೆಗಳನ್ನು ಓದಿಕೊಳ್ಳತಕ್ಕದ್ದು ಹಾಗೂ ನೀಡಿರುವ ಸೂಚನೆಗಳನ್ವಯ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು. ತಪ್ಪು ಅಥವಾ ಸುಳ್ಳು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸದ್ದಲ್ಲಿ ಯಾವುದೇ ಸಮಯದಲ್ಲಿಯಾದರೂ ಅಭ್ಯರ್ಥಿತನವು ರದ್ದುಗೊಳ್ಳುವುದು ಹಾಗೂ ನಿಯಮಾನುಸಾರ ಅಂತಹವರ ವಿರುದ್ಧ ಸರ್ಕಾರವು / ಪ್ರಾಧಿಕಾರ / ಸಂಸ್ಥೆಯು ಕಾನೂನಿನ್ವಯ ಸೂಕ್ತ ಕ್ರಮ ಕೈಗೊಳ್ಳುವುದು.

7. ಶುಲ್ಕ: ಆನ್ ಲೈನ್ ಮೂಲಕ ಶುಲ್ಕ ಪಾವತಿಸಬಹುದಾಗಿರುತ್ತದೆ.



ವಿಕಲ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ( ಶೇ.40ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವವರು ಮತ್ತು ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಹೊಂದಿರುವವರು).

8. ಸ್ಪರ್ಧಾತ್ಮಕ ಪರೀಕ್ಷಾ ವಿಧಾನ:

ಮೇಲ್ಕಂಡ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್ ಲೈನ್ - ಒಎಂಆರ್ ಮೂಲಕ ಪರೀಕ್ಷೆ ನಡೆಸಲಾಗುವುದು.

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುವುದು. ( ಆಡಳಿತಾತ್ಮಕ ಉದ್ದೇಶದಿಂದ ಜಿಲ್ಲಾ ಪರೀಕ್ಷಾ ಕೇಂದ್ರಗಳು ಬದಲಾವಣೆಯ ಷರತ್ತಿಗೆ ಒಳಪಟ್ಟಿರುತ್ತದೆ.) ಅಭ್ಯರ್ಥಿಗಳಿಗೆ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಳ್ಳಲು ಪ್ರಕಟಣೆಯ ಮೂಲಕ ತಿಳಿಸಲಾಗುವುದು ಹಾಗೂ ಈ ಬಗ್ಗೆ ಮಾಹಿತಿಯನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿಯೂ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಒಂದು ಮೂಲ ಗುರುತಿನ ಚೀಟಿಯೊಂದಿಗೆ ( ಪ್ಯಾನ್ ಕಾರ್ಡ್/ ವಾಹನ ಚಾಲನಾ ಪರವಾನಗಿ/ ಆಧಾರ್ ಕಾರ್ಡ್/ ಪಾಸ್ಪೋರ್ಟ್/ ವೋಟರ್ ಐಡಿ/ ಸರ್ಕಾರೀ ನೌಕರರ ಐಡಿ) ಪರೀಕ್ಷಾ ಕೇಂದ್ರಗಳಿಗೆ ಹೋಗಬೇಕು. ತಪ್ಪಿದ್ದಲ್ಲಿ ಪರೀಕ್ಷಾ ಕೇಂದ್ರವನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.

   

 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು